October 22, 2024
WhatsApp Image 2023-09-07 at 10.48.09 PM

ಬೆಂಗಳೂರು:ಬಿಜೆಪಿಯ ಬೈಂದೂರಿನ ಮಾಜಿ ಶಾಸಕ ಬಿಎಂ ಸುಕುಮಾರ ಶೆಟ್ಟಿ ಕಾಂಗ್ರೆಸ್ ಸೇರ್ಪಡೆಗೆ ಒಪ್ಪಿಗೆ ಸೂಚಿಸಿದ್ದಾರೆ.ಬಿಜೆಪಿಯಲ್ಲಿ ಭವಿಷ್ಯ ಇಲ್ಲ.ಅಲ್ಲಿ ಕಾಲೆಳೆಯುವವರೇ ಜಾಸ್ತಿ.ನನಗೆ ಕಳೆದ ಸಲ ಟಿಕೆಟ್ ಕೊಡದೆ ವಂಚಿಸಿದರು ಎಂದು ಅವರು ಹೇಳಿದರು. ಇತ್ತೀಚೆಗೆ ಅವರು ಡಿಕೆ ಶಿವಕುಮಾರ್ ರವರನ್ನು ಭೇಟಿ ಆಗಿದ್ದಾರೆ.

 

‘:ಮುಂದಿನ ದಿನಗಳಲ್ಲಿ ಬಿಜೆಪಿಗೆ ಭವಿಷ್ಯ ಇಲ್ಲ ಎಂದು ಕಾಂಗ್ರೆಸ್ ಸೇರುವ ಧೃಢ ನಿರ್ಧಾರ ಮಾಡಿದ್ದೇನೆ. ಕರಾವಳಿಯಲ್ಲಿ ಹಿಂದುತ್ವದ ಅಲೆ ಹೊರತುಪಡಿಸಿ ಬೇರೆಲ್ಲ ಕಡೆ ಬಿಜೆಪಿ ಹೆಸರು ಹಾಳುಮಾಡಿಕೊಂಡಿದೆ. ಡಿ ಕೆ ಶಿವಕುಮಾರ್ ಬಹಳಷ್ಟು ಬಾರಿ ಕರೆಮಾಡಿ ಆಹ್ವಾನ ನೀಡಿದ್ದಾರೆ. ಈಗ ನಾನು ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿ ಪಕ್ಷಕ್ಕೆ ಸೇರುವ ಬಗ್ಗೆ ಗ್ರೀನ್ ಸಿಗ್ನಲ್ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಆಪರೇಷನ್ ಹಸ್ತ ಮಾಡುವುದಿಲ್ಲ ಎಂದೇ ಹೇಳುತ್ತಿದ್ದ ಕಾಂಗ್ರೆಸ್ ಸದ್ದಿಲ್ಲದೆ ಬಿಜೆಪಿಯ ಶಾಸಕರನ್ನು ತನ್ನತ್ತ ಸೆಳೆಯುತ್ತಿದೆ.

About The Author

Leave a Reply

Your email address will not be published. Required fields are marked *

You cannot copy content of this page.