
ಉಡುಪಿ : ಕಳೆದ 18 ವರ್ಷಗಳಿಂದ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ.ಅಬ್ದುಲ್ ಹಮೀದ್ (48) ಬಂಧಿತ ಆರೋಪಿ.
ಆರೋಪಿ ಮೂಲತಃ ಚಿಕ್ಕಮಗಳೂರು ಜಿಲ್ಲೆಯವನು ಉಡುಪಿ ನಗರ ಠಾಣೆಯ ಸಿಬ್ಬಂದಿಗಳಾದ ಸಂಜಯ್ ಹೆಚ್ ಸಿ ಹಾಗೂ ಹೇಮಂತ್ ಕುಮಾರ್ ಎಂ. ಆರೋಪಿಯನ್ನು ಮಂಡ್ಯ ಜಿಲ್ಲೆಯ ತಾವರೆಗೆರೆ ಎಂಬಲ್ಲಿ ಬಂಧಿಸಿ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಯನ್ನು ಫೆಬ್ರವರಿ 25ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ.
