ಉಡುಪಿ: ಮನೆಯ ಹೊರಗಡೆ ನಿಲ್ಲಿಸಿದ್ದ ಕಾರನ್ನು ಕಳವು ಮಾಡಿರುವ ಘಟನೆ ಅಂಬಲಪಾಡಿ ಗ್ರಾಮದ ಕಾಳಿಕಾಂಬ ನಗರ ಎಂಬಲ್ಲಿ ನಡೆದಿದೆ. ಶಾರದಾ ಎಂಬವರು ಮನೆಗೆ ಬೀಗ ಹಾಕಿ ಮನೆಯವರೊಂದಿಗೆ ಬೆಂಗಳೂರಿಗೆ ಹೋಗಿದ್ದು, ವಿಚಾರ ತಿಳಿದು ಮನೆಗೆ ಬಂದು ನೋಡಿದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಈ ಮಧ್ಯೆ ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು, ಕಾರಿನ ಕೀಯನ್ನು ತೆಗೆದು ಮನೆಯ ಹೊರಗಿದ್ದ ಕೆಎ20 ಎಂಇ 0780 ನಂಬರಿನ ಮಾರುತಿ ಸ್ವಿಫ್ಟ್ ಕಾರನ್ನು ಹಾಗೂ ಆರ್ಸಿ, ಡಿಎಲ್, ಇನ್ಸುರೆನ್ಸ್ಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆಂದು ದೂರಲಾಗಿದೆ. ಕಳವಾದ ಕಾರಿನ ಮೌಲ್ಯ 7ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Check Also
ಕೇರಳದಲ್ಲಿ ‘ವೆಸ್ಟ್ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ
ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …