ಉಡುಪಿ: ತಾಲೂಕು ಸಾಹಿತ್ಯ ಸಮ್ಮೇಳನದ ಬಿತ್ತಿಪತ್ರ ಸಚಿವರಿಂದ ಲೋಕಾರ್ಪಣೆ.

ತಾಲೂಕು ಸಮ್ಮೇಳನಗಳಿಗೆ ನೀಡುವ ಅನುದಾನವನ್ನು ಸ್ಥಗಿತಗೊಳಿಸಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಪರಿಶೀಲಿಸಿ ಕಾರ್ಯಗತ ಗೊಳಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಖಾತೆ ಸಚಿವ ಶ್ರೀ ಶಿವರಾಜ್‌ ಸಂಗಪ್ಪ ತಂಗಡಗಿ ಹೇಳಿದರು.

ಅವರು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಉಡುಪಿ ತಾಲೂಕು ಘಟಕದ ವತಿಯಿಂದ ಡಿಸೆಂಬರ್ 30, ಶನಿವಾರದಂದು ಮಣಿಪಾಲದ ಶಿವಪ್ಪಾಡಿ ಉಮಾಮಹೇಶ್ವರ ದೇವಸ್ಥಾನದ ಶ್ರೀ ರಮಾನಂದ ಸ್ಮೃತಿ ಮಂಟಪದಲ್ಲಿ ನಡೆಯಲಿರುವ ಉಡುಪಿ ತಾಲೂಕು 14ನೆ ಕನ್ನಡ ಸಾಹಿತ್ಯ ಸಮ್ಮೇಳನದ ಬಿತ್ತಿ ಚಿತ್ರವನ್ನು ಬೆಳಗಾವಿಯ ಸುವರ್ಣ ಸೌದದ ಸಚಿವರ ಕಚೇರಿಯಲ್ಲಿ ಬುಧವಾರ ಬಿಡುಗಡೆಗೊಳಿಸಿ ಮಾತನಾಡಿದರು.

ಉಡುಪಿ ಜಿಲ್ಲೆ ಹಾಗೂ ತಾಲೂಕು ಘಟಕದ ಸಾಹಿತ್ಯ ಪರಿಷತ್ತಿನ ಕಾರ್ಯ ವೈಖರಿಯನ್ನು ಶ್ಲಾಘಿಸಿ ಸಮ್ಮೇಳನದಲ್ಲಿ ಭಾಗವಹಿಸುವೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ತಾಲೂಕು ಘಟಕದ ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು ಮತ್ತು ಜಿಲ್ಲಾ ಸಹ ಕಾರ್ಯದರ್ಶಿ ಮೋಹನ್ ಉಡುಪ ಹಂದಾಡಿ ಉಪಸ್ಥಿತರಿದ್ದರು.

Check Also

ಉಳ್ಳಾಲ: ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಅವಿವಾಹಿತ ವ್ಯಕ್ತಿಯ ಮೃತದೇಹ ಪಕ್ಕದ ಪಾಳು ಬಿದ್ದ ಬಾವಿಯಲ್ಲಿ ಇಂದು ಪತ್ತೆಯಾದ ಘಟನೆ ಕೊಲ್ಯ ,ಕುಜುಮಗದ್ದೆಯಲ್ಲಿ ನಡೆದಿದೆ. …

Leave a Reply

Your email address will not be published. Required fields are marked *

You cannot copy content of this page.