ಉಡುಪಿ: ತನ್ನದೇ ಬಸ್ ನಡಿ ಸಿಲುಕಿ ಸಾವನಪ್ಪಿದ ಬಸ್‌ ಮಾಲಕ ದಯಾನಂದ ಶೆಟ್ಟಿ

ಉಡುಪಿ: ತನ್ನದೇ ಬಸ್ ನ ಅಡಿಗೆ ಬಿದ್ದು ಬಸ್ ನ ಮಾಲಕ ಸಾವನಪ್ಪಿದ ಘಟನೆ ಬಡಗಬೆಟ್ಟುವಿನ ಗ್ಯಾರೇಜ್‌ ಒಂದರಲ್ಲಿ ಬುಧವಾರ ಸಂಭವಿಸಿದೆ.

ಮೃತರನ್ನು ಮಾಂಡವಿ ಖಾಸಗಿ ಬಸ್‌ನ ಮಾಲಕ ದಯಾನಂದ ಶೆಟ್ಟಿ (65) ಮೃತಪಟ್ಟವರು. ಇವರು ತಮ್ಮ ಬಸ್‌ ಅನ್ನು ಗ್ಯಾರೇಜ್‌ನಲ್ಲಿ ರಿಪೇರಿಗೆ ನೀಡಿದ್ದನ್ನು ನೋಡಲು ಬಂದಿದ್ದರು. ಈ ವೇಳೆ ಬಸ್‌ನ ಎದುರು ನಿಂತಿದ್ದ ವೇಳೆ ಚಾಲಕ ಬಸ್‌ ಚಲಾಯಿಸಿದ ಪರಿಣಾಮ ಅವರು ಮುಂಭಾಗದ ಚಕ್ರಕ್ಕೆ ಸಿಲುಕಿ ಗಂಭೀರ ಗಾಯಗೊಂಡಿದ್ದರು. ತತ್‌ಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

Check Also

ಮಣಿಪಾಲ: CA ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

ಮಣಿಪಾಲ : ಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆರ್ಗಾ ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು ಚಿಕ್ಕಮಗಳೂರು ಜಿಲ್ಲೆಯ …

Leave a Reply

Your email address will not be published. Required fields are marked *

You cannot copy content of this page.