June 7, 2025
th

ಉಡುಪಿ:  ಎಂ ಜಿ ಎಂ ಕಾಲೇಜ್ ಸನಿಹ ಇರುವ ಮೆಸ್ಕಾಂ ಸಿಬ್ಬಂದಿಗಳ ವಸತಿ ನಿಲಯದಲ್ಲಿ ವಾಸವಾಗಿದ್ದ ಮೆಸ್ಕಾಂ ಸಿಬ್ಬಂದಿಯೊಬ್ಬರು ಮಲಗಿದ್ದಾಗಲೇ ಮೃತಪಟ್ಟಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.

ನಗರ ಠಾಣೆಯ ಪೋಲಿಸರು ತಕ್ಷಣ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ‌ ಮೆಸ್ಕಾಂ ಸಿಬ್ಬಂದಿಯನ್ನು ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರ ನೆರವು ಪಡೆದು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಅಂಬುಲೆನ್ಸ್ ವಾಹನದಲ್ಲಿ ಸಾಗಿಸಿದ್ದರು. ಪರೀಕ್ಷಿಸಿದ ವೈದ್ಯರಿಂದ ವ್ಯಕ್ತಿ ಮೃತಪಟ್ಟಿರುವುದು ತಿಳಿದುಬಂದಿತು. ಮೃತ ಮೆಸ್ಕಾಂ ಸಿಬ್ಬಂದಿಯನ್ನು ಟಿ. ಪಿ. ಸಿದ್ಧಲಿಂಗಯ್ಯ, ತುಮಕೂರು ಜಿಲ್ಲೆಯ‌ವರೆಂದು ತಿಳಿದುಬಂದಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಸಾವು ಸಂಭವಿಸಿದೆ. ಸಾವಿಗೆ‌ ಸ್ವಷ್ಟ ಕಾರಣ ತಿಳಿದುಬಂದಿಲ್ಲ. ತನಿಖೆ ಪ್ರಗತಿಯಲ್ಲಿದೆ.

ನಗರ ಪೋಲಿಸ್ ಠಾಣೆಯ ವೃತ್ತ ನಿರೀಕ್ಷಕ ಮಂಜುನಾಥ ಬಡಿಗೇರ್, ಕಾನೂನು ಸುವ್ಯವಸ್ಥೆ ಅಧಿಕಾರಿ ಭರತೇಶ್, ಹರೀಶ್ ಮಾಳ ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ಮೆಸ್ಕಾಂ ಅಧಿಕಾರಿ ಗಣರಾಜ್ ಭಟ್ ಇದ್ದರು.

About The Author

Leave a Reply

Your email address will not be published. Required fields are marked *

<p>You cannot copy content of this page.</p>