May 23, 2025 6:58:41 AM
8bba94e1-b300-4077-998e-dd9ea538d749

ಬೆಳ್ತಂಗಡಿ: ತಾಲೂಕಿನ ಕೊಕ್ರಾಡಿಯಲ್ಲಿ ಬೈಕಿಗೆ ಪಿಕಪ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ.

ಉಜ್ವಲ್ ಹೆಗ್ಡೆ (19) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಮನೆಯಿಂದ ಮೂಡಬಿದ್ರೆಯ ಕಾಲೇಜಿಗೆಂದು ಹೊರಟಿದ್ದ ಉಜ್ವಲ್ ಚಲಾಯಿಸುತ್ತಿದ್ದ ಬೈಕಿಗೆ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಪಿಕಪ್ ವಾಹನ ಡಿಕ್ಕಿಹೊಡೆದಿದೆ.

ಪಿಕಪ್ ಚಾಲಕ ಹರೀಶ್ ಪೂಜಾರಿ ಎಂಬವರು ಅಜಾಗರೂಕತೆಯಿಂದ ವಾಹನ ಚಲಾಯಿಸಿ ಬೈಕಿಗೆ ಡಿಕ್ಕಿ ಹೊಡೆದಿದ್ದು, ಹೊಡೆತದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಉಜ್ವಲ್ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗೆ ಅವರು ಮೃತಪಟ್ಟಿದ್ದರು

About The Author

Leave a Reply

Your email address will not be published. Required fields are marked *

<p>You cannot copy content of this page.</p>