ಉಡುಪಿ: ಎಸ್.ಪಿ,ಡಿಸಿ ಹೆಸರಲ್ಲಿ ವಾಟ್ಸಾಪ್ ಖಾತೆ; ಸಂದೇಶ ಕಳುಹಿಸಿ ಹಣಕ್ಕೆ ಬೇಡಿಕೆ

ಉಡುಪಿ: ದುಷ್ಕರ್ಮಿಗಳು ಉಡುಪಿ ಜಿಲ್ಲೆ ಪೊಲೀಸ್‌ ವರಿಷ್ಠಾಧಿಕಾರಿ ಹಾಕೆ ಅಕ್ಷಯ್‌ ಮಚ್ಚೀಂದ್ರ ಹಾಗೂ ಜಿಲ್ಲಾಧಿಕಾರಿ ಕೂರ್ಮರಾವ್ ಎಂ. ಅವರ ಫೋಟೊ ಬಳಸಿ ಕೊಂಡು ವಾಟ್ಸಾಪ್ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಪ್ರಕರಣ ದಾಖಲಾಗಿದೆ.

8810107494 ನಂಬರ್ ನಿಂದ ಎಸ್ಪಿ ಹಾಗೂ ಡಿಸಿ ಅವರೇ ಮೆಸೇಜ್ ಕಳುಹಿಸುವ ರೀತಿಯಲ್ಲಿ ಸಂದೇಶಗಳನ್ನು ಕಳುಹಿಸುತ್ತಿದ್ದು, ಎಸ್‌ಬಿಐ ಬ್ಯಾಂಕ್‌ ಖಾತೆಗೆ ಹಣ ಕಳುಹಿಸುವಂತೆ ತಿಳಿಸಿದೆ. ಈ ನಂಬರ್ ಮಧ್ಯಪ್ರದೇಶದ ಲೊಕೇಶನ್ ತೋರಿಸುತ್ತಿದೆ.

ಈ ಮೊಬೈಲ್‌ ನಂಬರ್‌ ನಿಂದ ಯಾವುದೇ ಸಂದೇಶ ಬಂದರೂ ಹಣ ಹಾಕಬಾರದು. ಈ ಬಗ್ಗೆ ಕೂಡಲೇ ಹತ್ತಿರದ ಪೊಲೀಸ್‌ ಠಾಣೆಗೆ ದೂರು ನೀಡುವಂತೆ ಪ್ರಕಟನೆ ತಿಳಿಸಿದೆ.

Check Also

ಬಂಟ್ವಾಳ: ಮದ್ವೆಯಾದ ಎರಡೇ ದಿನಕ್ಕೆ ನವ ವಿವಾಹಿತೆ ಸಾವು, ಪತಿ ಗಂಭೀರ

ಬಂಟ್ವಾಳ: ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ …

Leave a Reply

Your email address will not be published. Required fields are marked *

You cannot copy content of this page.