ಮಣಿಪಾಲ: ವಿದ್ಯಾರ್ಥಿಯನ್ನು ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಯುವಕರ ತಂಡ-ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಉಡುಪಿ: ಮಣಿಪಾಲದ ವಿದ್ಯಾರ್ಥಿಯೋರ್ವನನ್ನು ಯುವಕರ ತಂಡವೊಂದು ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸಂಭವಿಸಿದ್ದು,ಘಟನೆಯ ಸಿಸಿಟಿವಿ ದೃಶ್ಯ ವೈರಲ್ ಆಗಿದೆ. ಮಣಿಪಾಲ ಸರಳೆಬೆಟ್ಟು ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಸುಮಾರು ಆರು ಮಂದಿ ಸ್ಥಳೀಯ ಯುವಕರು ಮುಂಬೈ ಮೂಲದ ಆರುಷ್ ಕುಮಾರ್ (21) ಮೇಲೆ ಕ್ಷುಲ್ಲಕ ವಿಚಾರಕ್ಕಾಗಿ ಹಲ್ಲೆ ನಡೆಸಿದ್ದಾರೆ. ಆರುಷ್, ಮಣಿಪಾಲ ಎಂಐಟಿ ಕಾಲೇಜಿನಲ್ಲಿ ಕಲಿಯುತ್ತಿದ್ದಾರೆ. ಮದ್ಯ ಸೇವಿಸುತ್ತಿದ್ದ ಪುಂಡರ ತಂಡದ ಓರ್ವ ಸದಸ್ಯನಿಗೆ ಕಾಲು ತಾಗಿದ ಹಿನ್ನಲೆಯಲ್ಲಿ ಜಗಳ ಪ್ರಾರಂಭಗೊಂಡಿದೆ.

ಇದೇ ವಿಚಾರಕ್ಕೆ ವಿದ್ಯಾರ್ಥಿಗೆ ಬಾರ್ ನಲ್ಲಿ ಹಲ್ಲೆ ನಡೆಸಿದ ತಂಡ ,ಆತನ ಅಪಾರ್ಟ್ ಮೆಂಟ್ ವರೆಗೂ ಅಟ್ಟಾಡಿಸಿ ಹಲ್ಲೆ ನಡೆಸಿದೆ.ಹಲ್ಲೆಯ ವೀಡಿಯೋ ವೈರಲ್ ಆಗುತ್ತಿದ್ದಂತೆ ಮಣಿಪಾಲ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.