March 4, 2026
WhatsApp Image 2025-04-27 at 9.38.21 AM

ಹೆಬ್ರಿ ತಾಲೂಕಿನ ತಿಂಗಳೆ ಸೀತಾನದಿ ಹೊಳೆಯಲ್ಲಿ ಯುವಕನೋರ್ವ ಕಾಲು ಜಾರಿ ಬಿದ್ದು ಸಾವನಪ್ಪಿದ ಘಟನೆ ಎ. 26ರಂದು ಸಂಭವಿಸಿದೆ.

ಹೆಬ್ರಿ ಕಿನ್ನಿ ಗುಡ್ಡೆ ನಿವಾಸಿ ಸುಧಾಕರ್ ಶೆಟ್ಟಿ ಅವರ ಪುತ್ರ ಸಂಕೇತ್ ಶೆಟ್ಟಿ (24) ಮೃತಪಟ್ಟ ಯುವಕ.

ಸ್ನೇಹಿತರೊಂದಿಗೆ ನದಿಗೆ ಸ್ಥಾನಕ್ಕೆ ತೆರಳಿದಾಗ ಕಾಲು ಜಾರಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಹೆಬ್ರಿ ಗ್ರಾಮ ಪಂಚಾಯತ್‌ನ ಅಂಗವಿಕಲರ ಪುನರ್‌ವಸತಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಇವರು ಹೆಬ್ರಿ ಜೆಸಿಐ ಸೇರಿದಂತೆ ವಿವಿಧ ಸಂಘಟನೆಗಳಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದರು. ಎಲ್ಲರೊಂದಿಗೆ ಸದಾ ನಗುಮೊಗದೊಂದಿಗೆ ಬೆರೆಯುತ್ತಿದ್ದರು.

About The Author

Leave a Reply

Your email address will not be published. Required fields are marked *

You cannot copy content of this page.