ಉಡುಪಿ : ಕರಾವಳಿಯ ಜಿಲ್ಲೆಗಳಾದ ದಕ್ಷಿಣಕನ್ನಡ ಉಡುಪಿಯಲ್ಲಿ ಬಾರೀ ಮಳೆಯಾಗುತ್ತಿದ್ದು, ಈ ಹಿನ್ನಲೆ ಈಗಾಗಲೇ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಇಂದು ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಆದರೆ ಉಡುಪಿ ಜಿಲ್ಲೆಯಲ್ಲಿ ಇಂದು ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಸ್ಪಷ್ಟಪಡಿಸಿದ್ದಾರೆ.
ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದರೂ, ನಿರೀಕ್ಷಿತ ಮಟ್ಟದ ಭಾರೀ ಮಳೆಯಾಗದೇ ಇರುವುದರಿಂದ ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ (ಜೂ.27) ಗುರುವಾರ ರಜೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಸ್ಪಷ್ಟಪಡಿಸಿದ್ದಾರೆ.