

ಉಡುಪಿ: ಉಡುಪಿ ಖಾಸಗಿ ಕಾಲೇಜಿನಲ್ಲಿ ಶೌಚಾಲಯದಲ್ಲಿ ವಿಡಿಯೋ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಶಾಸಕ ಯಶ್ಪಾಲ್ ಸುವರ್ಣ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿ. ಪರಮೇಶ್ವರ್ ಮಗ ಲಿಂಗ ಬದಲಾಯಿಸಿಕೊಂಡಿದ್ದು ಮಕ್ಕಳಾಟ. ಆದರೆ ಉಡುಪಿಯ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಮಾಡಿರುವುದು ಮಕ್ಕಳಾಟವಲ್ಲ ಎಂದರು. ಇಂದು ಕ್ಯಾಮೆರಾ ಇಟ್ಟ ವಿದ್ಯಾರ್ಥಿಗಳು ನಾಳೆ ಬಾಂಬ್ ಕೊಟ್ಟರು ಇಡುತ್ತಾರೆ. ಆದ್ದರಿಂದ ಈ ಬಗ್ಗೆ ಸಮರ್ಪಕ ತನಿಖೆಯಾಗಬೇಕು ಎಂದು ಶಾಸಕ ಯಶ್ಪಾಲ್ ಸುವರ್ಣ ಒತ್ತಾಯ ಮಾಡಿದರು.