ಉಡುಪಿ : ಕಂಠಪೂರ್ತಿ ಕುಡಿದು ಶಾಲೆ ಜಗುಲಿ ಮೇಲೆ ಮಲಗಿದ ಶಿಕ್ಷಕನ ಅಮಾನತು

ಉಡುಪಿ:  ಕೆಲಸದ ಸಮಯದಲ್ಲಿ ಶಾಲಾ ಆವರಣದಲ್ಲಿ ಮದ್ಯಪಾನ ಮಾಡಿ ಮಲಗಿದ್ದ ಪೆರ್ಡೂರು ಸಮೀಪದ ಅಲಂಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ನಾಯಕ್ ಅವರನ್ನು ಅಮಾನತುಗೊಳಿಸಲಾಗಿದೆ.

ಬಡ ಮಕ್ಕಳ ಭವಿಷ್ಯ ರೂಪಿಸಬೇಕಾದ ಶಿಕ್ಷಕ ಮದ್ಯ ಸೇವಿಸಿ ಅಮಲಿನಲ್ಲಿ ತೇಲುತ್ತಾ ಶಾಲೆಯ ಜಗಲಿ ಮೇಲೆ ಸುಖ ನಿದ್ದೆ ಮಾಡಿದ್ದು, ಈ ಘಟನೆಗೆ  ಪೆರ್ಡೂರು ಗ್ರಾ.ಪಂ. ಅಧ್ಯಕ್ಷರು, ಶಾಲಾಭಿವೃದ್ಧಿ ಸಮಿತಿ, ಗ್ರಾಮಸ್ಥರು ಹಾಗೂ ಸಾಮಾಜಿಕ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಕ್ರಮಕ್ಕೆ ಆಗ್ರಹಿಸಿದ್ದರು.

ಘಟನೆಯ ಸತ್ಯಾಸತ್ಯತೆಯ ವರದಿ ಪರಿಶೀಲಿಸಿದ ಡಿಡಿಪಿಐ ಗಣಪತಿ ಕೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಕುಡುಕ ಶಿಕ್ಷಕ ಕೃಷ್ಣಮೂರ್ತಿ ನಾಯಕ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

Check Also

ಶಾಲಾ ಶಿಕ್ಷಕಿ ಕಿಡ್ನಾಪ್ ಪ್ರಕರಣ- ನೆಲ್ಯಾಡಿ ಬಳಿ ಅಪಹರಣಕಾರರ ಬಂಧನ

ಹಾಸನ: ಹಾಸನದ ಬಿಟ್ಟಗೌಡನಹಳ್ಳಿ ಬಳಿ ನಡೆದಿದ್ದ ಶಾಲಾ ಶಿಕ್ಷಕಿ ಕಿಡ್ನಾಪ್ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಅಪಹರಣಕಾರರನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡದ …

Leave a Reply

Your email address will not be published. Required fields are marked *

You cannot copy content of this page.