![](https://thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg)
ಬೆಳ್ತಂಗಡಿ, ಮೇ 6: ಬೆಳ್ತಂಗಡಿ ಬಸ್ ನಿಲ್ದಾಣದ ಬಳಿಯ ವಾರ್ತಾಭವನ ಕಟ್ಟಡದಲ್ಲಿದ್ದ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಕಚೇರಿಯನ್ನು ಮಿನಿವಿಧಾನ ಸೌಧದ ಪಕ್ಕದಲ್ಲಿರುವ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ನ ಎರಡನೇ ಮಹಡಿಗೆ ಸ್ಥಳಾಂತರ ಮಾಡಲಾಗಿದ್ದು, ನೂತನ ತಾತ್ಕಾಲಿಕ ಕಚೇರಿಯನ್ನು ಇಂದು ಸರಳ ರೀತಿಯಲ್ಲಿ ಸಾಂಕೇತಿಕವಾಗಿ ಉದ್ಘಾಟನೆ ಮಾಡಲಾಯಿತು.
![](https://thrishulnews.com/wp-content/uploads/2023/05/shridevi-7.jpg)
![](https://thrishulnews.com/wp-content/uploads/2023/05/samudra-advt-1-1024x711.jpg)
![](https://thrishulnews.com/wp-content/uploads/2023/05/vidhyanad-jain-advt-2-1024x520.jpg)
ಬೆಳ್ತಂಗಡಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸುಸಜ್ಜಿತ ಕಟ್ಟಡ ನಿರ್ಮಾಣ ಆಗಲಿದ್ದು, ಇದಕ್ಕಾಗಿ ವಾರ್ತಾಭವನ ಕಟ್ಟಡವೂ ತೆರವುಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಪತ್ರಕರ್ತರ ಸಂಘದ ಕಚೇರಿ ಸ್ಥಳಾಂತರವಾಗಿದ್ದು, ಮುಂದಿನ ದಿನಗಳಲ್ಲಿ ಪತ್ರಿಕಾಗೋಷ್ಠಿಗಳು ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ನಲ್ಲಿರುವ ಪತ್ರಿಕಾಭವನದಲ್ಲಿ ಕಚೇರಿಯಲ್ಲಿ ನಡೆಯಲಿದೆ.