ಬೆಳ್ತಂಗಡಿ: ಅಜ್ಜಿಯನ್ನು ಕೊಲೆ ಮಾಡಿ ಚಿನ್ನಾಭರಣ ಕಳ್ಳತನ ಮಾಡಿ ಬಂಧಿತ ಆರೋಪಿ ಸಾವು

ಬೆಳ್ತಂಗಡಿ: ಬೆಳಾಲು ಗ್ರಾಮದಲ್ಲಿ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಅಶೋಕ್ ನಿನ್ನೆ ಬೆಳಗ್ಗೆ ಮಂಗಳೂರಿನ ವೆನ್ಲಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಶುಗರ್ ಹಾಗೂ ಟಿ ಬಿ ಕಾಯಿಲೆಯಿಂದ ಬಳಲುತ್ತಿದ್ದ ಆತನನ್ನು ವೆನ್ಲಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎನ್ನಲಾಗಿದೆ.ಆದರೆ ಚಿಕಿತ್ಸೆ ಫಲಿಸದೆ ಆರೋಪಿ ಅಶೋಕ್ ಬೆಳಗ್ಗೆ ಸಾವನ್ನಪ್ಪಿದ್ದಾನೆ. ಈತ ಸಾವನ್ನಪ್ಪಿದ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಈತ ಮಂಗಳೂರಿನ ಸಬ್ ಜೈಲಿನಲ್ಲಿದ್ದ.ಈತನ ವಿರುದ್ಧ ಧರ್ಮಸ್ಥಳದಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು.  

Check Also

ಒಂದು ಕೈಯಲ್ಲಿ ಛತ್ರಿ ಹಿಡಿದುಕೊಂಡು ಬಸ್ ಚಾಲನೆ ಮಾಡಿದ ಚಾಲಕ- ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

ಮುಂಬೈ:ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಎಂಎಸ್‌ಆರ್‌ಟಿಸಿ) ಬಸ್ ಚಾಲಕ ಮಳೆಯ ಸಮಯದಲ್ಲಿ ವಾಹನದ ಮೇಲ್ಛಾವಣಿ ಸೋರಿಕೆಯಾಗಿದ್ದರಿಂದ ಒಂದು ಕೈಯಲ್ಲಿ …

Leave a Reply

Your email address will not be published. Required fields are marked *

You cannot copy content of this page.