ಗ್ರಾಮ ಸುಭಿಕ್ಷೆಗಾಗಿ ಅಳದಂಗಡಿ ಸೋಮನಾಥೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ನಡೆಯಿತು ಸೀಯಾಳ ಅಭಿಷೇಕ

ಅಳದಂಗಡಿ, ಜೂ. 9: ಅಳದಂಗಡಿ ಶ್ರೀ ಸೋಮನಾಥೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಅಜಿಲ ಸೀಮೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರ ಉಪಸ್ಥಿತಿಯಲ್ಲಿ ಗ್ರಾಮ ಸುಭಿಕ್ಷೆಗಾಗಿ ಸೀಯಾಳ ಅಭಿಷೇಕವು ಇಂದು ನೆರವೇರಿತು.

ದೇವಳದ ಅರ್ಚಕರಾದ ಪ್ರಕಾಶ್ ಹೊಳ್ಳ, ಕಿರಣ್ ಭಟ್ ಹಾಗೂ ಮುರಳಿ ಭಟ್ ಅವರು ಶಾಸ್ತೋಕ್ತವಾಗಿ ಪೂಜಾ ಕೈಂಕರ್ಯವನ್ನು ನೆರವೇರಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಳದಂಗಡಿ ವಲಯ, ಜನ ಜಾಗೃತಿ ವೇದಿಕೆ ಅಳದಂಗಡಿ ಹಾಗೂ ವಲಯ ವಿಪತ್ತು ನಿರ್ವಹಣಾ ಘಟಕ ಅಳದಂಗಡಿ ಸಹಯೋಗದೊಂದಿಗೆ ಸೇವಾ ಕಾರ್ಯಕ್ರಮವನ್ನು ಮಾಡಲಾಯಿತು.

ವಲಯ ಮೇಲ್ವಿಚಾರಕಿ ಶ್ರೀಮತಿ ಸುಮಂಗಲ, ಸೇವಾ ಪ್ರತಿನಿಧಿಗಳು, ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾದ ನಾರಾಯಣ ಸಾಲಿಯಾನ್, ಶ್ರೀಮತಿ ಗುಣಮ್ಮ, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ವಿಪತ್ತು ನಿರ್ವಹಣಾ ಘಟಕದ ಸಂಯೋಜಕ ಹಾಗೂ ಸ್ವಯಂಸೇವಕರು ಉಪಸ್ಥಿತರಿದ್ದರು.

Check Also

ಉಡುಪಿ: ಪ್ರೇಯಸಿಯೊಂದಿಗೆ ವಾಗ್ವಾದ- ಅರ್ಧದಾರಿಯಲ್ಲಿ ಬಸ್ ಬಿಟ್ಟು ಹೋದ ಚಾಲಕ

ಉಡುಪಿ:  ಖಾಸಗಿ ಬಸ್ ಚಾಲಕನೊಬ್ಬ ತನ್ನ ಪ್ರೇಯಸಿಯೊಂದಿಗೆ ವಾಗ್ವಾದಕ್ಕಿಳಿದು ಬಸ್ಸನ್ನು ಅರ್ಧದಾರಿಯಲ್ಲಿ ನಿಲ್ಲಿಸಿ ಹೋದ ವಿಚಿತ್ರ ಘಟನೆ ಉಡುಪಿಯಲ್ಲಿ ನಡೆದಿದೆ. …

Leave a Reply

Your email address will not be published. Required fields are marked *

You cannot copy content of this page.