ವೇಣೂರು ಠಾಣೆ: ಚುನಾವಣೆ ನಿಮಿತ್ತ ನಿಯೋಜನೆಗೊಂಡಿದ್ದ ಪೊಲೀಸ್ ಉಪನಿರೀಕ್ಷಕ ಶ್ರೀಶೈಲಾ ಡಿ. ಮುರುಗೋಡು ವರ್ಗಾವಣೆ

ವೇಣೂರು, ಜೂ. 9: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ವೇಣೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸ್ ಉಪನಿರೀಕ್ಷಕ ಶ್ರೀಶೈಲಾ ಡಿ. ಮುರುಗೋಡು ಅವರು ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಮತ್ತೆ ಕಾಪು ಠಾಣೆಗೆ ವರ್ಗಾವಣೆಗೊಂಡಿದ್ದಾರೆ.
ಶ್ರೀಶೈಲ ಅವರು ಸಹಾಯಕ ಪೊಲೀಸ್ ಉಪನಿರೀಕ್ಷಕ ವೆಂಕಟೇಶ್ ನಾಯ್ಕ್ ಅವರಿಗೆ ಅಧಿಕಾರ ಹಸ್ತಾಂತರಿಸಿ ನಿರ್ಗಮಿಸಿದರು. ಶ್ರೀಶೈಲಾ ಡಿ. ಮುರುಗೋಡು ಅವರನ್ನು ಗೌರವಿಸಿ ಬೀಳ್ಕೊಡಲಾಯಿತು. ಸಿಬ್ಬಂದಿಗಳಾದ ರವೀಂದ್ರ, ಪ್ರಶಾಂತ್ ಕುಮಾರ್, ಅಭಿಜಿತ್, ಸತ್ಯಪ್ರಕಾಶ್ ಮತ್ತು ಶ್ರೀನಿವಾಸ್ ಉಪಸ್ಥಿತರಿದ್ದರು.

Check Also

ಮಂಗಳೂರು: ವೈದ್ಯರ ನಿರ್ಲಕ್ಷ್ಯದಿಂದ ಯುವಕ ಮೃತ್ಯು ಪ್ರಕರಣ – ಕಾಸ್ಮೆಟಿಕ್ ಸರ್ಜರಿ ಕ್ಲಿನಿಕ್‌ಗೆ ಬೀಗ ಜಡಿದ ಆರೋಗ್ಯ ಇಲಾಖೆ

ಮಂಗಳೂರು: ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ನಗರದ ಕಂಕನಾಡಿಯ ಬೆಂದೂರ್ ವೆಲ್‌ನ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ …

Leave a Reply

Your email address will not be published. Required fields are marked *

You cannot copy content of this page.