ಪಂಚಭೂತಗಳಲ್ಲಿ ಲೀನವಾದ ಸ್ಪಂದನಾ..!

ಬೆಂಗಳೂರು : ಸಂಬಂಧಿಕರೊಂದಿಗೆ ವಿದೇಶ ಪ್ರವಾಸಕ್ಕೆ ತೆರಳಿದ್ದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರು ಹೃದಯಾಘಾತದಿಂದ ಮೃತಪಟ್ಟಿದ್ದರು. ಮೃತಪಟ್ಟ ಸ್ಪಂದನ ಅವರ ಮೃತ ದೇಹವನ್ನ ನಿನ್ನೆ ಬೆಂಗಳೂರಿಗೆ ತರಲಾಗಿತ್ತು. ಇಂದು ಬೆಂಗಳೂರಿನ ಶ್ರೀರಾಂಪುರದ ಹರೀಶ್ಚಂದ್ರ ಘಾಟ್ ನಲ್ಲಿ ಸ್ಪಂದನಾ ಅವರು ಪಂಚಭೂತಗಳಲ್ಲಿ ಲೀನವಾದರು.

 

ಶ್ರೀರಾಮಪುರದ ಹರೀಶ್ಚಂದ್ರ ಘಾಟ್ ವರೆಗೆ ಸ್ಪಂದನ ಅವರ ಅಂತಿಮ ಯಾತ್ರೆ ಆಗಮಿಸಿದ ನಂತರ ಈ ವೇಳೆ ಪುತ್ರ ಶೌರ್ಯ ವಿಧಿ ವಿಧಾನಗಳ ಪ್ರಕಾರ ಮಡಿಕೆಯನ್ನು ಹೊತ್ತು ಅವರ ತಾಯಿಯ ಮೃತದೇಹದ ಸುತ್ತ ಮೂರು ಸುತ್ತು ಹಾಕಿದ. ಈಡಿಗ ಸಂಪ್ರದಾಯದಂತೆ ಅಂತಿಮ ವಿಧಾನ ಈ ವೇಳೆ ಪುತ್ರ ಶೌರ್ಯನಿಗೆ ತಂದೆ ವಿಜಯ್ ರಾಘವೇಂದ್ರ ಅವರು ಸಹಕರಿಸಿದರು.ನಂತರ ವಿದ್ಯುತ್ ಚಿತಾಗರದತ್ತ ಅವರ ದೇಹವನ್ನು ತೆಗೆದುಕೊಂಡು ಹೋದರು.

ಈ ಸಂದರ್ಭದಲ್ಲಿ ಕುಟುಂಬಸ್ಥರು ಹಾಗೂ ಸಂಬಂಧಿಕರು ಅಂತಿಮವಾಗಿ ದರ್ಶನ ಪಡೆದರು. ಅಂತಿಮ ವಿಧಿ ವಿಧಾನಗಳನ್ನು ಪತಿ ಹಾಗು ನಟ ವಿಜಯರಾಘವೇಂದ್ರ ಹಾಗೂ ಪುತ್ರ ಶೌರ್ಯ ನೆರವೇರಿಸಿ ಅವರ ಮೃತ ದೇಹಕ್ಕೆ ಅಗ್ನಿಸ್ಪರ್ಶ ನೀಡಿದರು. ತಂದೆ ಶಿವರಾಂ, ಚಿಕ್ಕಪ್ಪ ಬಿಕೆ ಹರಿಪ್ರಸಾದ್, ಮಾವ ಚಿನ್ನೇಗೌಡರು, ನಟ ಶಿವರಾಜ್ ಕುಮಾರ್, ಪತ್ನಿ ಗೀತಾ ಶಿವರಾಜ್ ಕುಮಾರ್, ಮೈದುನ ಶ್ರೀ ಮುರಳಿ, ಸೇರಿದಂತೆ, ಕನ್ನಡ ಚಿತ್ರರಂಗದ ಎಲ್ಲಾ ಹಿರಿಯ-ಕಿರಿಯ ಕಲಾವಿದರು, ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ದುಃಖದ ಮಡುವಿನಲ್ಲಿ ಇದಿದ್ದು ಕಂಡು ಬಂದಿತು.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.