ಕುಲಶೇಖರ: ನಿರೀಕ್ಷೆಗೂ ಮೀರಿ ಯಶಸ್ವಿಯಾದ ಬ್ರಹ್ಮಕಲಶಸಹಕರಿಸಿದ ಮಹನೀಯರಿಗೆ ನಾಳೆ ಅಭಿನಂದನೆ ಕಾರ್ಯಕ್ರಮ

ಕುಲಶೇಖರ, ಜೂ. 10: ಇತಿಹಾಸ ಪ್ರಸಿದ್ಧವಾದ ಇಲ್ಲಿಯ ಶ್ರೀ ವೀರನಾರಾಯಣ ದೇವಸ್ಥಾನದ ಜೀರ್ಣೋದ್ಧಾರಗೈದು ಪುನರ್ ಪ್ರತಿಷ್ಠೆ ಮತ್ತು ಸಂಭ್ರಮದ ಬ್ರಹ್ಮಕಲಶ ನೆರವೇರಿದ್ದು, ನಿರೀಕ್ಷೆಗೂ ಮೀರಿ ಯಶಸ್ವಿಯಾದ ಕಾರ್ಯಕ್ರಮದ ಅಂಗವಾಗಿ ವಿಶೇಷ ಅಭಿನಂದನಾ ಸಭೆಯು ನಾಳೆ ಜೂ. 11ರಂದು ಬೆಳಿಗ್ಗೆ 10 ಗಂಟೆಯಿಂದ ದೇವಸ್ಥಾನದ ಸಭಾಂಗಣದಲ್ಲಿ ಜರಗಲಿದೆ ಎಂದು ಆಡಳಿತ ಮಂಡಳಿಯ ಪ್ರಕಟಣೆ ತಿಳಿಸಿದೆ.
ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಅಭಿನಂದನಾ ಕಾರ್ಯಕ್ರಮ ಜರಗಲಿದ್ದು, ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶದಲ್ಲಿ ವಿವಿಧ ರೀತಿಯಲ್ಲಿ ಸಹಕರಿಸಿದ ಮಹನೀಯವರು ಹಾಗೂ ಭಕ್ತಾಧಿಗಗಳೆಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕೋರಲಾಗಿದೆ.

Check Also

ಉಡುಪಿ: ಪ್ರೇಯಸಿಯೊಂದಿಗೆ ವಾಗ್ವಾದ- ಅರ್ಧದಾರಿಯಲ್ಲಿ ಬಸ್ ಬಿಟ್ಟು ಹೋದ ಚಾಲಕ

ಉಡುಪಿ:  ಖಾಸಗಿ ಬಸ್ ಚಾಲಕನೊಬ್ಬ ತನ್ನ ಪ್ರೇಯಸಿಯೊಂದಿಗೆ ವಾಗ್ವಾದಕ್ಕಿಳಿದು ಬಸ್ಸನ್ನು ಅರ್ಧದಾರಿಯಲ್ಲಿ ನಿಲ್ಲಿಸಿ ಹೋದ ವಿಚಿತ್ರ ಘಟನೆ ಉಡುಪಿಯಲ್ಲಿ ನಡೆದಿದೆ. …

Leave a Reply

Your email address will not be published. Required fields are marked *

You cannot copy content of this page.