ಮುದ್ದಾಡಿ ಪ್ಲಾಸ್ಟಿಕ್ ತ್ಯಾಜ್ಯ ರಾಶಿ ವಿಲೇವಾರಿರೂರಲ್‌ನ್ಯೂಸ್ ಎಕ್‌ಪ್ರೆಸ್ ವರದಿಗೆ ವೇಣೂರು ಗ್ರಾ.ಪಂ. ಸ್ಪಂದನೆ

ವೇಣೂರು, ಎ. 19: ವೇಣೂರು ಗ್ರಾ.ಪಂ. ವ್ಯಾಪ್ತಿಯ ಬಜಿರೆ ಗ್ರಾಮದ ಮುದ್ದಾಡಿ-ಸಿದ್ದಕಟ್ಟೆ ರಸ್ತೆಯ ಪಕ್ಕದಲ್ಲಿದ್ದ ಪ್ಲಾಸ್ಟಿಕ್ ತ್ಯಾಜ್ಯದ ರಾಶಿಯನ್ನು ವೇಣೂರು ಗ್ರಾ.ಪಂ. ವಿಲೇವಾರಿ ಮಾಡಿಸಿದೆ.
ಮುದ್ದಾಡಿಯ ಜನವಸತಿ ಪ್ರದೇಶದ ರಸ್ತೆ ಬದಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಯಾರೋ ಸುರಿದು ಸ್ವಚ್ಛ ಭಾರತ್ ಪರಿಕಲ್ಪನೆಗೆ ಸವಾಲು ಎಸೆದಿರುವ ಬಗ್ಗೆ ರೂರಲ್‌ನ್ಯೂಸ್ ಎಕ್ಸ್‌ಪ್ರೆಸ್ ವರದಿ ಮಾಡಿತ್ತು. ಪಂಚಾಯತ್‌ನ ಘನತ್ಯಾಜ್ಯ ವಿಲೇವಾರಿ ಘಟಕದ ಅಣತಿ ದೂರದಲ್ಲೇ ಈ ಪಾಸ್ಟಿಕ್ ತ್ಯಾಜ್ಯದ ರಾಶಿ ಕಂಡು ಬಂದಿತ್ತು. ಇದೀಗ ವರದಿಯ ಬೆನ್ನಲ್ಲೇ ವೇಣೂರು ಗ್ರಾ.ಪಂ. ಆಡಳಿತ ಸೂಕ್ತ ಕ್ರಮ ಕೈಗೊಂಡಿದ್ದು, ಸ್ಥಳೀಯವಾಗಿ ತ್ಯಾಜ್ಯವನ್ನು ರಸ್ತೆ ಬದಿ ಎಸೆಯದಂತೆ ಎಚ್ಚರಿಕೆಯನ್ನೂ ಅಧಿಕಾರಿಗಳು ನೀಡಿದ್ದಾರೆ. ಪಂಚಾಯತ್‌ನ ಕಾರ್ಯವೈಖರಿಗೆ ಗ್ರಾಮಸ್ಥರಿಂದ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

Check Also

ಉಡುಪಿ: ಪ್ರೇಯಸಿಯೊಂದಿಗೆ ವಾಗ್ವಾದ- ಅರ್ಧದಾರಿಯಲ್ಲಿ ಬಸ್ ಬಿಟ್ಟು ಹೋದ ಚಾಲಕ

ಉಡುಪಿ:  ಖಾಸಗಿ ಬಸ್ ಚಾಲಕನೊಬ್ಬ ತನ್ನ ಪ್ರೇಯಸಿಯೊಂದಿಗೆ ವಾಗ್ವಾದಕ್ಕಿಳಿದು ಬಸ್ಸನ್ನು ಅರ್ಧದಾರಿಯಲ್ಲಿ ನಿಲ್ಲಿಸಿ ಹೋದ ವಿಚಿತ್ರ ಘಟನೆ ಉಡುಪಿಯಲ್ಲಿ ನಡೆದಿದೆ. …

Leave a Reply

Your email address will not be published. Required fields are marked *

You cannot copy content of this page.