ಮಂಗಳೂರು, ಮಾರ್ಚ್, 31: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಕರುಣಾ ಲಾಡ್ಜ್ನಲ್ಲಿ ನಡೆದಿದೆ.
ದೇವೇಂದ್ರ (48), ನಿರ್ಮಲಾ(48), ಚೈತ್ರಾ(09), ಚೈತನ್ಯ (09), ಆತ್ಮಹತ್ಯೆ ಶರಣಾದವರಾಗಿದ್ದಾರೆ. ಇವರು ಮೂಲತಃ ಮೈಸೂರಿನ ವಿಜಯನಗರ ಮೂಲದವರಾಗಿದ್ದು, ಸಾಲ ತೀರಿಸಲಾಗದೇ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆತ್ಮಹತ್ಯೆ ಮಾಡಿಕೊಂಡವರಲ್ಲಿ ಇಬ್ಬರು ಅವಳಿ ಹೆಣ್ಣುಮಕ್ಕಳು ಕೂಡ ಇದ್ದಾರೆ ಎನ್ನಲಾಗಿದೆ.